ಕರ್ನಾಟಕದಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಮುನ್ಸೂಚನೆ
ಬೆಂಗಳೂರು, ಸೆಪ್ಟೆಂಬರ್ 26: ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕಾಗಿದೆ. ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಹಾವೇರಿ, ಕೊಪ್ಪಳ, ಕಲಬುರಗಿ, ರಾಯಚೂರು, ಯಾದಗಿರಿ ಮತ್ತು ಧಾರವಾಡ ಜಿಲ್ಲೆಯಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
from Oneindia.in - thatsKannada News https://ift.tt/2WaZN46





No comments:
Post a Comment