ಮಹಾರಾಷ್ಟ್ರದಿಂದ ರಾಜ್ಯಕ್ಕೆ ವಾಪಸಾಗುವವರಿಗೆ ಕೊರೊನಾ ಪರೀಕ್ಷೆ ಕಡ್ಡಾಯವಲ್ಲ
ಬೆಂಗಳೂರು, ನವೆಂಬರ್ 24: ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ವಾಪಸಾಗುವವರಿಗೆ ಕೊರೊನಾ ಪರೀಕ್ಷೆಯ ಅಗತ್ಯವಿಲ್ಲ ಎಂದು ಸರ್ಕಾರ ಹೇಳಿದೆ. ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ವಾಪಸ್ ಆಗುವವರಿಗೆ ಆರ್ಟಿ-ಪಿಸಿಆರ್ ಕೋವಿಡ್ ಪರೀಕ್ಷೆ ವರದಿ ನೀಡುವ ನಿಯಮಕ್ಕೆ ಬ್ರೇಕ್ ಬಿದ್ದಿದ್ದು, ಸದ್ಯ ಪ್ರಯಾಣಿಕರು ವರದಿ ತೋರಿಸದೆ ನಿರಾಳವಾಗಿ ಓಡಾಡಬಹುದಾಗಿದೆ. ಆದರೆ, ಕೋವಿಡ್ ಪರೀಕ್ಷೆ ಇಲ್ಲದಿದ್ದರೂ ಕೆಲ ಷರತ್ತುಗಳು ಅನ್ವಯ ಎಂದು ರಾಜ್ಯ ಸರ್ಕಾರ ತಿಳಿಸಿದೆ.
from Oneindia.in - thatsKannada News https://ift.tt/3cHUlKH





No comments:
Post a Comment