ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿಷಯ ಪ್ರಸ್ತಾಪಿಸಿದ ಪಾಕಿಸ್ತಾನಕ್ಕೆ ಭಾರತದ ತಿರುಗೇಟು
ನ್ಯೂಯಾರ್ಕ್, ನವೆಂಬರ್ 17: ಪಾಕಿಸ್ತಾನ ನಡೆಸುತ್ತಿರುವ ಗಡಿಯಾಚೆಗಿನ ಭಯೋತ್ಪಾದನೆಯ ವಿರುದ್ಧ ಭಾರತವು ದೃಢ ಮತ್ತು ನಿರ್ಣಾಯಕ ಕ್ರಮವನ್ನು ತೆಗೆದುಕೊಳ್ಳುತ್ತಲೇ ಇರುತ್ತದೆ ಎಂದು ಭಾರತೀಯ ಪ್ರತಿನಿಧಿ ಕಾಜಲ್ ಭಟ್ ವಿಶ್ವಸಂಸ್ಥೆಯಲ್ಲಿ ಮಂಗಳವಾರ ತಿಳಿಸಿದ್ದಾರೆ. ಭಯೋತ್ಪಾದನೆ, ಹಗೆತನ ಮತ್ತು ಹಿಂಸಾಚಾರ ಮುಕ್ತ ವಾತಾವರಣ ನಿರ್ಮಾಣದ ಕುರಿತು ಅರ್ಥಪೂರ್ಣ ಸಂವಾದಕ್ಕೆ ಅನುಕೂಲಕರವಾಗುವ ವಾತಾವರಣವನ್ನು ಸೃಷ್ಟಿಸುವ ಜವಾಬ್ದಾರಿಯನ್ನು ಭಾರತ ವಹಿಸಿಕೊಳ್ಳುತ್ತದೆ ಎಂದು ತಿಳಿಸಿದರು.
from Oneindia.in - thatsKannada News https://ift.tt/3wS8huS





No comments:
Post a Comment